alex Certify ‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ…… | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ……

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರೂ ಪ್ರತಿನಿತ್ಯ ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ.

ಶುಕ್ರವಾರ ರಾತ್ರಿ 9 ಗಂಟೆಯಿಂದ ಆರಂಭವಾದ ಮೊದಲ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಿದೆ. ತಡವಾಗಿಯಾದರೂ ಎಚ್ಚೆತ್ತುಕೊಂಡಿರುವ ಸಾರ್ವಜನಿಕರು ವೀಕೆಂಡ್ ಕರ್ಫ್ಯೂನಲ್ಲಿ ಮನೆಯಲ್ಲೇ ಇರುವ ಮೂಲಕ ಸಂಪೂರ್ಣವಾಗಿ ಯಶಸ್ಸು ಮಾಡಿದ್ದಾರೆ.

ಇದರ ಮಧ್ಯೆಯೂ ಕೆಲವರು ಅನಗತ್ಯ ಓಡಾಟ ನಡೆಸಿದ್ದು ಪೊಲೀಸರು ಅವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಈ ನಡುವೆ ಶಿವಮೊಗ್ಗದಲ್ಲಿ ಸ್ವಾರಸ್ಯಕರ ಪ್ರಕರಣವೊಂದು ನಡೆದಿದ್ದು, ಪೊಲೀಸರು ಕೆಲಕಾಲ ಗಾಬರಿಗೊಳಗಾದ ಘಟನೆ ನಡೆದಿದೆ.

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ಅಮೀರ್ ಅಹ್ಮದ್ ಸರ್ಕಲ್ನಲ್ಲಿ ವ್ಯಕ್ತಿಯೊಬ್ಬರು ಬೈಕಿನಲ್ಲಿ ಬಂದಿದ್ದಾರೆ. ಅವರನ್ನು ತಡೆದು ಪೊಲೀಸರು ವಿಚಾರಿಸುತ್ತಿದ್ದ ವೇಳೆ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಆಗ ಎಲ್ಲರೂ ಗಾಬರಿಗೊಳಗಾಗಿದ್ದಾರೆ.

ಅಸಲಿಗೆ ನಡೆದಿದ್ದೇನೆಂದರೆ ಈ ವ್ಯಕ್ತಿ ತಪಾಸಣೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಹೋದಾಗ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇರದ ಕಾರಣ ಮನೆಯಲ್ಲೇ ಐಸೋಲೇಶನ್ ಗೆ ಒಳಗಾಗಲು ಸೂಚಿಸಿದ್ದಾರೆ. ಹೀಗಾಗಿ ಆ ವ್ಯಕ್ತಿ ಆಸ್ಪತ್ರೆಯಿಂದ ಮನೆಗೆ ಹೋಗುವಾಗ ಪೊಲೀಸರು ತಡೆದಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...