alex Certify ವೈದ್ಯೆಯಾಗುವ ಕನಸು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯೆಯಾಗುವ ಕನಸು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಿಕ್ಕಂದಿನಲ್ಲಿ ಹೃದಯಾಘಾತಕ್ಕೊಳಗಾಗಿ ಚೇತರಿಸಿಕೊಂಡಿದ್ದ ಹುಡುಗಿಯೊಬ್ಬಳು ಮುಂದೆ ಹೃದಯ ತಜ್ಞೆಯಾಗುವ ಮಹದಾಸೆ ಹೊಂದಿದ್ದು, ಆದರೆ ಅದು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ ನಡೆದಿದೆ.

ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಚನ್ನಪಟ್ಟಣ ಗ್ರಾಮದ 19 ವರ್ಷದ ಸಂಕಲ್ಪ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇಕಡ 96 ಅಂಕ ಗಳಿಸಿದ್ದರು. ವೈದ್ಯೆಯಾಗಬೇಕೆಂಬ ಕಾರಣಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದರೂ ಸಹ ಯಶಸ್ವಿಯಾಗಿರಲಿಲ್ಲ.

ಇನ್ನು ಲಕ್ಷಾಂತರ ರೂಪಾಯಿ ಡೊನೇಶನ್ ಕಟ್ಟಿ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಪಡೆಯುವುದು ಕನಸಿನ ಮಾತಾಗಿದ್ದ ಕಾರಣ ಸಂಕಲ್ಪ ತೀವ್ರವಾಗಿ ನಿರಾಸೆಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ತಮ್ಮ ನಿವಾಸದಲ್ಲಿಯೇ ಸಂಕಲ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...