alex Certify ಶಕುನಿ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ: ಜಿಟಿಡಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಕುನಿ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ: ಜಿಟಿಡಿ ವಾಗ್ದಾಳಿ

ಮೈಸೂರು: ಜೆಡಿಎಸ್ ನಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಶಕುನಿ, ಮಂಥರೆಯ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಜಿ.ಟಿ.ಡಿ., ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ನಾಶವಾಯಿತು. ರಾಮಾಯಣದಲ್ಲಿ ಮಂಥರೆ ಮಾತು ಕೇಳಿ ಕೈಕೇಯಿ ರಾಮನನ್ನು ವನವಾಸಕ್ಕೆ ಕಳುಹಿಸಿದಳು. ಇದೀಗ ರಾಜಕೀಯದಲ್ಲಿ ಕುಮಾರಸ್ವಾಮಿ ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ಶಕುನಿಗೆ ಹೋಲಿಸಿದ ಜಿ.ಟಿ. ದೇವೇಗೌಡ, ಕುಮಾರಸ್ವಾಮಿಯವರೇ ನಿವ್ಯಾಕೆ ಶಕುನಿ ಮಾತು ಕೇಳುತ್ತೀರಿ? ಸಾ.ರಾ. ಮಹೇಶ್ ಮಾತು ಕೇಳಿ ನನ್ನನ್ನು ಜೆಡಿಎಸ್ ನಿಂದ ಹೊರ ಹಾಕುತ್ತೇನೆ ಎಂದಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನಿಸುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ ನಲ್ಲಿ ಕೂಡಿ ಹಾಕಿ ಬೀಗ ಹಾಕಲಾಗಿದೆ. ಮೈಮುಲ್ ಚುನಾವಣೆ ವೇಳೆಯೂ ನನ್ನ ವಿರುದ್ಧ ಮಾತನಾಡಲಾಗಿದೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆ ಎಂದು ಹೇಳಿದ್ದಾರೆ. ಇದೆಲ್ಲ ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...