ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 990 ಕ್ಕೆ ತಲುಪಿದ್ದು, ಇಂದು ಮಧ್ಯಾಹ್ನ ಕೊರೊನಾಗೆ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಹೊರಬಿದ್ದ ಬಳಿಕ ಈ ಸಂಖ್ಯೆ 1 ಸಾವಿರ ದಾಟಲಿದೆಯಾ ಎಂಬ ಆತಂಕಕ್ಕೆ ಕಾರಣವಾಗಿದೆ.
ಗುರುವಾರದಂದು ಇಬ್ಬರು ಈ ಮಹಾಮಾರಿಗೆ ಬಲಿಯಾಗಿದ್ದು, 31 ಮಂದಿ ಸೋಂಕು ಪೀಡಿತರಾಗಿರುವುದು ಪತ್ತೆಯಾಗಿತ್ತು. ರಾಜ್ಯದಲ್ಲಿ ಈ ಮಾರಣಾಂತಿಕ ಸೋಂಕಿಗೆ ಈವರೆಗೆ 35 ಮಂದಿ ಬಲಿಯಾಗಿದ್ದಾರೆ.
ಇಂದು ಶಂಕಿತ ಕೊರೊನಾ ಸೋಂಕಿತರ ಪರೀಕ್ಷಾ ವರದಿ ಹೊರ ಬೀಳಲಿದ್ದು, ಎಷ್ಟು ಮಂದಿ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಬಹಿರಂಗವಾಗಲಿದೆ. ಇದರ ಮಧ್ಯೆ ಹೊರ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗಲಿದೆಯಾ ಎಂಬ ಭೀತಿ ವ್ಯಕ್ತವಾಗಿದೆ.