alex Certify ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಇಲ್ಲಿದೆ ಒಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಇಲ್ಲಿದೆ ಒಂದು ಮುಖ್ಯ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವನ್ನೇ ವ್ಯಾಪಿಸುವ ಮೂಲಕ ಸಾರ್ವಜನಿಕ ಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಇದರ ನಿಯಂತ್ರಣಕ್ಕಾಗಿ ಜಾರಿಗೊಂಡ ಲಾಕ್ ಡೌನ್ ನಿಂದಾಗಿ ಆರ್ಥಿಕತೆ ಹದಗೆಟ್ಟಿದ್ದಲ್ಲದೆ ಶೈಕ್ಷಣಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ.

ಲಾಕ್ ಡೌನ್ ಜಾರಿಯಾದ ಪರಿಣಾಮ ರಾಜ್ಯದಲ್ಲಿ ನಿಗದಿಯಾಗಿದ್ದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಇದೀಗ ನಾಲ್ಕನೇ ಹಂತದ ಲಾಕ್ ಡೌನ್ ವೇಳೆ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ಮುಂದೂಡಲ್ಪಟ್ಟಿದ್ದ ಪರೀಕ್ಷೆಗಳಿಗೆ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಇದೇ ರೀತಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಜುಲೈ 5ರಂದು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಜೊತೆಗೆ ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...