alex Certify ಶಿರಾ ಕ್ಷೇತ್ರಕ್ಕೆ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾ ಕ್ಷೇತ್ರಕ್ಕೆ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಕೊರೊನಾ ಸೋಂಕು ದೃಢ

ತುಮಕೂರು: ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಚುರುಕುಗೊಂಡಿದ್ದು, ಇದೀಗ ಶಿರಾ ಕ್ಷೇತ್ರಕ್ಕೆ ಜೆಡಿಎಸ್ ನಿಂದ ದಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಶಿರಾ ಕ್ಷೇತ್ರಕ್ಕೆ ಅಮ್ಮಾಜಮ್ಮಾ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಾ ಅವರೇ ಜೆಡಿಎಸ್ ಅಭ್ಯರ್ಥಿ ಎಂದರು. ಇನ್ನು ಆರ್.ಆರ್. ನಗರ ಕ್ಷೇತ್ರಕ್ಕೆ ಮೂವರು ಯುವಕರ ಹೆಸರು ಚರ್ಚೆಯಲ್ಲಿದ್ದು, ಅಕ್ಟೋಬರ್ 8ರಂದು ಅಭ್ಯರ್ಥಿ ಹೆಸರು ಅಂತಿಮಗೊಳಿಸುವುದಾಗಿ ತಿಳಿಸಿದರು.

ಶಿರಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ ಅವರಿಗೆ ಕೊರೊನಾ ಪಾಸಿಟೀವ್ ಇರುವುದು ದೃಢಪಟ್ಟಿದೆ. ಈ ಕುರಿತು ಅವರ ಪುತ್ರ ಸತ್ಯಪ್ರಕಾಶ್, ಮಾಹಿತಿ ನೀಡಿದ್ದು, ಅಮ್ಮಾಜಮ್ಮ ಅವರಿಗೆ ಎರಡು ದಿನಗಳಿಂದ ಮೈಕೈ ನೋವು, ಜ್ವರ ಇತ್ತು. ನಿನ್ನೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು ಕೊರೊನಾ ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...