alex Certify ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅರ್ಜುನ್, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು ಗೊತ್ತಾಗುತ್ತಿಲ್ಲ. ಶೀಘ್ರದಲ್ಲಿಯೇ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ

ಕಳೆದ ವರ್ಷವಷ್ಟೇ ಹೃದಯಾಘಾತದಿಂದ ಚೇತರಿಸಿಕೊಂಡಿದ್ದ ಅರ್ಜುನ್ ಜನ್ಯ ಅವರಿಗೆ ಈಗ ಕೊರೊನಾ ಸೋಂಕು ತಗುಲಿರುವುದು ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವ ಅರ್ಜುನ್ ಶೀಘ್ರದಲ್ಲಿ ಗುಣಮುಖನಾಗುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...