ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆ ಮುಖ್ಯಮಂತ್ರಿ ಅಥವಾ ಸಚಿವರು ಆಗಮಿಸಿದ ಸಂದರ್ಭದಲ್ಲಿ ಗೌರವಾರ್ಥವಾಗಿ ಸೆಲ್ಯೂಟ್ ಹೊಡೆಯುವುದು ಸಂಪ್ರದಾಯ. ಆದರೆ ಗೋಕಾಕ್ ಪೊಲೀಸರು ಈಗ ಹೊಸ ನಡೆಯೊಂದನ್ನು ಅನುಸರಿಸಿ ಟೀಕೆಗೆ ಗುರಿಯಾಗಿದ್ದಾರೆ.
ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ಪುತ್ರ ಅಮರನಾಥ ಜಾರಕಿಹೊಳಿಯವರಿಗೆ ಗೋಕಾಕ್ ಸಿಪಿಐ ಗೋಪಾಲ ರಾಥೋಡ್, ಗೋಕಾಕ ನಗರ ಠಾಣಾ ಪಿಎಸ್ಐ ಅನಿಲ್ ಕುಮಾರ್ ಹಾಗೂ ಗೋಕಾಕ ಗ್ರಾಮೀಣ ಪಿಎಸ್ಐ ನಾಗರಾಜ ಕಿಲಾರೆ ಸೆಲ್ಯೂಟ್ ಹೊಡೆಯುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಚಿವರ ಪುತ್ರನಿಗೆ ಪೊಲೀಸ್ ಅಧಿಕಾರಿಗಳು ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.