alex Certify ಸದನದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸದನದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು…!

ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ತಾರಕಕ್ಕೇರುವಂತೆ ಪರಸ್ಪರ ವಾಗ್ವಾದ ನಡೆಸುವ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರುಗಳು ಅಲ್ಲಿಂದ ಹೊರಬಂದ ನಂತರ ಸ್ನೇಹಿತರಂತೆ ವರ್ತಿಸುತ್ತಾರೆ. ಅಲ್ಲದೆ ಪ್ರತಿ ಪಕ್ಷದವರಾದರೂ ಹಿರಿಯರಿಗೆ ಗೌರವಿಸುತ್ತಾರೆ. ಅದಕ್ಕೆ ಉದಾಹರಣೆಯೊಂದು ಇಲ್ಲಿದೆ.

ಮಂಗಳವಾರದಂದು ವಿಧಾನಸಭೆಯ ಕಲಾಪದಲ್ಲಿ ಪಾಲ್ಗೊಂಡ ಬಳಿಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅವರೊಂದಿಗೆ ಚಹಾ ಕುಡಿಯಲೆಂದು ಮೊಗಸಾಲೆಗೆ ಆಗಮಿಸಿದ್ದರು. ಈ ವೇಳೆ ಕೆಲ ಬಿಜೆಪಿ ಸದಸ್ಯರು ಸಿದ್ದರಾಮಯ್ಯನವರ ಕಾಲಿಗೆ ನಮಸ್ಕರಿಸಿದ್ದಾರೆ.

ಮೊಗಸಾಲೆಯಲ್ಲಿ ಕೆಲ ಶಾಸಕರು ಮಾತನಾಡುತ್ತಿದ್ದ ವೇಳೆ ಸಿದ್ದರಾಮಯ್ಯ ಆಗಮಿಸಿದ್ದು, ಅವರ ಬಳಿ ಎಲ್ಲರೂ ಹೋಗಿದ್ದಾರೆ. ಈ ಸಂದರ್ಭದಲ್ಲಿ ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ರಾಮಚಂದ್ರ ಸಿದ್ದರಾಮಯ್ಯನವರ ಕಾಲಿಗೆ ನಮಸ್ಕರಿಸಿದ್ದು, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ಅನುಸರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...