alex Certify ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲು ಸಿಎಂಗೆ ಇಬ್ರಾಹಿಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲು ಸಿಎಂಗೆ ಇಬ್ರಾಹಿಂ ಮನವಿ

ಇನ್ನೇನು ರಂಜಾನ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ರಂಜಾನ್ ಹಬ್ಬದಲ್ಲಿ ಮುಸ್ಲಿಂ ಜನಾಂಗದವರೆಲ್ಲಾ ಒಂದೆಡೆ ಸೇರಿ ಪ್ರಾರ್ಥನೆ ಮಾಡುವುದು ಅವರ ಸಂಪ್ರದಾಯ. ಹೀಗಾಗಿ ಈ ವರ್ಷವೂ ಅವಕಾಶ ಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸಿಎಂಗೆ ಮನವಿ ಮಾಡಿದ್ದಾರೆ.

ಹೌದು, ಕೊರೊನಾ ಹಿನ್ನೆಲೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ದೇವಸ್ಥಾನ, ದರ್ಗಾ, ಚರ್ಚ್, ಮಸೀದಿಗಳು ಮಠಗಳನ್ನು ತೆರೆಯಲು ಅವಕಾಶ ಇಲ್ಲ. ಹೀಗಾಗಿ ಈ ಬಾರಿಯ ರಂಜಾನ್‌ಗೆ ಅವಕಾಶ ಕೊಡಿ ಎಂದು ಸಿಎಂಗೆ ಇಬ್ರಾಹಿಂ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿರುವ ಈದ್ಗಾ ಮೈದಾನದಲ್ಲಿ ಅವಕಾಶ ಮಾಡಿಕೊಡಿ. ಈ ವಿಚಾರವನ್ನು ಮೆಡಿಕಲ್ ಪರಿಣಿತರೊಂದಿಗೆ ಚರ್ಚೆ ಮಾಡಿಯೇ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಅಂತ ಕಾದುನೋಡಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...