ಇನ್ನೇನು ರಂಜಾನ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ರಂಜಾನ್ ಹಬ್ಬದಲ್ಲಿ ಮುಸ್ಲಿಂ ಜನಾಂಗದವರೆಲ್ಲಾ ಒಂದೆಡೆ ಸೇರಿ ಪ್ರಾರ್ಥನೆ ಮಾಡುವುದು ಅವರ ಸಂಪ್ರದಾಯ. ಹೀಗಾಗಿ ಈ ವರ್ಷವೂ ಅವಕಾಶ ಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸಿಎಂಗೆ ಮನವಿ ಮಾಡಿದ್ದಾರೆ.
ಹೌದು, ಕೊರೊನಾ ಹಿನ್ನೆಲೆ ದೇಶಾದ್ಯಂತ ಲಾಕ್ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ದೇವಸ್ಥಾನ, ದರ್ಗಾ, ಚರ್ಚ್, ಮಸೀದಿಗಳು ಮಠಗಳನ್ನು ತೆರೆಯಲು ಅವಕಾಶ ಇಲ್ಲ. ಹೀಗಾಗಿ ಈ ಬಾರಿಯ ರಂಜಾನ್ಗೆ ಅವಕಾಶ ಕೊಡಿ ಎಂದು ಸಿಎಂಗೆ ಇಬ್ರಾಹಿಂ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಈದ್ಗಾ ಮೈದಾನದಲ್ಲಿ ಅವಕಾಶ ಮಾಡಿಕೊಡಿ. ಈ ವಿಚಾರವನ್ನು ಮೆಡಿಕಲ್ ಪರಿಣಿತರೊಂದಿಗೆ ಚರ್ಚೆ ಮಾಡಿಯೇ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಅಂತ ಕಾದುನೋಡಬೇಕು.