alex Certify ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪ ರಾಜೀನಾಮೆಗೆ ಕೈ ನಾಯಕರ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪ ರಾಜೀನಾಮೆಗೆ ಕೈ ನಾಯಕರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಅಳಿಯನ ವಿರುದ್ಧ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದಿಂದ 666 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಕೋಲ್ಕತ್ತಾ ಗುತ್ತಿಗೆದಾರನಿಂದ ಅಕ್ರಮವಾಗಿ ಸಿಎಂ ಕುಟುಂಬಕ್ಕೆ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿದರು.

ಸಿಎಂ ಪುತ್ರ ವಿಜಯೇಂದ್ರ, ಶಶಿಧರ್ ಎಂಬುವವರಿಗೆ ಆರ್.ಟಿ.ಜಿ.ಎಸ್. ಮೂಲಕ ಕೋಲ್ಕತ್ತಾದಿಂದ ಬೆಂಗಳೂರಿನ ಅಕೌಂಟ್ ಗೆ ಹಣ ವರ್ಗಾವಣೆ ಆಗಿದೆ. ಗುತ್ತಿಗೆದಾರನ ಜೊತೆ ವಿಜಯೇಂದ್ರ ಮಾತನಾಡಿರುವ ಆಡಿಯೋ ಕೂಡ ನಮಗೆ ಲಭ್ಯವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒಪ್ಪಿಗೆ ಇಲ್ಲದೇ ಅಕ್ರಮ ಹಣ ವರ್ಗಾವಣೆ ವ್ಯವಹಾರ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಯಡಿಯೂರಪ್ಪ ಕುಟುಂಬದ ವಿರುದ್ಧ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...