alex Certify ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಹೊಸ ‘ಅತಿಥಿ’ಗಳ ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಹೊಸ ‘ಅತಿಥಿ’ಗಳ ಆಗಮನ

Yediyurappa moves confidence motion in the Assembly - The Economic ...

ಕರೋನಾ ವೈರಸ್ ಕಾರಣಕ್ಕಾಗಿ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.

ಪ್ರಮುಖ ಆದಾಯ ಮೂಲಗಳಾದ ಆಸ್ತಿ ನೋಂದಣಿ, ಮದ್ಯ ಮಾರಾಟ ಹಾಗೂ ವಾಹನ ನೋಂದಣಿಗೆ ಇದುವರೆಗೂ ನಿರ್ಬಂಧವಿದ್ದು, ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕಾಗಿ ಇದೀಗ ಕೇಂದ್ರ ಸರ್ಕಾರ ಸಾರಿಗೆ ಸಂಚಾರ ಹೊರತುಪಡಿಸಿ ಉಳಿದವಕ್ಕೆ ಕೆಲವೊಂದು ನಿರ್ಬಂಧಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಇದರಿಂದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದು ಇದರ ಜೊತೆಗೆ ತಮ್ಮ ನಿವಾಸಕ್ಕೆ ಹೊಸ ಅತಿಥಿಗಳ ಆಗಮನವಾಗಿರುವುದರಿಂದ ಸಂತಸಗೊಂಡಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್, ಗಿರ್ ತಳಿಯ ಎರಡು ಹಸುಗಳನ್ನು ಯಡಿಯೂರಪ್ಪನವರಿಗೆ ಉಡುಗೊರೆಯಾಗಿ ನೀಡಿದ್ದು ಶುಕ್ರವಾರ ಸಂಜೆ ಇವುಗಳನ್ನು ಬರ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರ ಕಾವೇರಿ ನಿವಾಸದಲ್ಲಿ ಹಸುಗಳಿಗಾಗಿ ಪ್ರತ್ಯೇಕ ಶೆಡ್ ನಿರ್ಮಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...