alex Certify ‘ಸಿಗಂದೂರೇಶ್ವರಿ’ ದರ್ಶನಕ್ಕೆ ನಿರ್ಬಂಧವಿದ್ದರೂ ಹರಿದುಬರುತ್ತಿದೆ ಭಕ್ತರ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಗಂದೂರೇಶ್ವರಿ’ ದರ್ಶನಕ್ಕೆ ನಿರ್ಬಂಧವಿದ್ದರೂ ಹರಿದುಬರುತ್ತಿದೆ ಭಕ್ತರ ದಂಡು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಪರಿಣಾಮ ಈ ಬಾರಿ ದೇವಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

ಆದರೆ ಲಾಕ್ಡೌನ್ ಸಡಿಲಿಕೆ ಬಳಿಕ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಸಿಗಂದೂರಿಗೆ ಬರುವ ಭಕ್ತರು ದೇವಾಲಯದ ಹೊರಗಿನಿಂದಲೇ ದೇವಿಗೆ ಕೈ ಮುಗಿಯುತ್ತಿದ್ದಾರೆ.

ಭಕ್ತರ ಜೊತೆಗೆ ಪ್ರವಾಸಿಗರು ಸಹ ಆಗಮಿಸುತ್ತಿದ್ದು, ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಿಗಂದೂರಿಗೆ ಆಗಮಿಸದಂತೆ ಸ್ಥಳೀಯರು ಮನವಿ ಮಾಡುತ್ತಿದ್ದಾರೆ. ಅಲ್ಲದೆ ಭಕ್ತರು, ಪ್ರವಾಸಿಗರ ಪ್ರಯಾಣಕ್ಕೆ ಅವಕಾಶ ನೀಡದಂತೆ ಸ್ಥಳೀಯ ಆಡಳಿತವನ್ನು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...