alex Certify ಸಿಡಿಲಿನಿಂದ ರಕ್ಷಣೆ ಪಡೆಯಲು ನೆರವಾಗುತ್ತೆ ‘ಧಾಮಿನಿ’ ಆಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲಿನಿಂದ ರಕ್ಷಣೆ ಪಡೆಯಲು ನೆರವಾಗುತ್ತೆ ‘ಧಾಮಿನಿ’ ಆಪ್

ಒಂದು ಅಂದಾಜಿನ ಪ್ರಕಾರ ದೇಶದಲ್ಲಿ ಪ್ರತಿವರ್ಷ 2500 ಮಂದಿ ಸಿಡಿಲಿಗೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಇದನ್ನು ತಡೆಗಟ್ಟಲು ಮುಂದಾಗಿರುವ ಕೇಂದ್ರ ಸರ್ಕಾರ ‘ಧಾಮಿನಿ’ ಎಂಬ ಆಪ್ ಅಭಿವೃದ್ಧಿಪಡಿಸಿದ್ದು, ಜನತೆಗೆ ಅನುಕೂಲಕರವಾಗಲಿದೆ.

ಈ ಆಪ್ ಅನ್ನು ರೈತರು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಡೌನ್ಲೋಡ್ ಮಾಡಿಕೊಂಡು ಹೆಸರು, ವಿಳಾಸ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಿದರೆ ಅವರಿರುವ ಪ್ರದೇಶದಲ್ಲಿ ಸಿಡಿಲಿನ ಕುರಿತು ಈ ಆಪ್ ಮುಂಚಿತವಾಗಿಯೇ ಮುನ್ಸೂಚನೆ ನೀಡುತ್ತದೆ.

ಆಗ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಿ ಪ್ರಾಣಾಪಾಯದಿಂದ ಪಾರಾಗಬಹುದಾಗಿದೆ. ಹವಾಮಾನ ಮುನ್ಸೂಚನೆ ಕೇಂದ್ರದ ಮುಖ್ಯ ಕಚೇರಿಯೊಂದಿಗೆ ಈ ಆಪ್ ಜೋಡಣೆಯಾಗಿರುವ ಕಾರಣ ಪ್ರತಿ ಹದಿನೈದು ನಿಮಿಷಗಳಿಗೊಮ್ಮೆ ಮಾಹಿತಿ ಅಪ್ಡೇಟ್ ಆಗುತ್ತಿರುತ್ತದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...