alex Certify ಸಿಡಿ ಪ್ರಕರಣ: ಆರೋಪಿ ನರೇಶ್ ಪತ್ನಿ ಎಸ್ಐಟಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ: ಆರೋಪಿ ನರೇಶ್ ಪತ್ನಿ ಎಸ್ಐಟಿ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ನರೇಶ್ ಪತ್ನಿಯನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ.

ಆರೋಪಿ ಮಾಜಿ ಪತ್ರಕರ್ತ ನರೇಶ್, ಇತ್ತೀಚೆಗೆ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ. ಸಿಡಿಯಲ್ಲಿದ್ದ ಯುವತಿ ನನ್ನ ಬಳಿ ಬಂದು ನ್ಯಾಯ ಕೊಡಿಸುವಂತೆ ಕೇಳಿದ್ದಳು. ತನಗಾದ ಅನ್ಯಾದ ಬಗ್ಗೆ ತಿಳಿಸಿದ್ದಳು. ಆದರೆ ಸಿಡಿ ಪ್ರಕರಣ ಬಹಿರಂಗ ಹೇಗಾಯಿತು ಎಂಬುದು ತನಗೆ ಗೊತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಚುರುಕುಗೊಳಿಸಿತ್ತು.

ಇದೀಗ ತುಮಕೂರಿನ ಶಿರಾ ಪೊಲಿಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಂಜುಮಾಲ ನೇತೃತ್ವದಲ್ಲಿ ನರೇಶ್ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ನರೇಶ್ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದ್ದ ವೇಳೆ ಲಕ್ಷಾಂತರ ರೂಪಾಯಿ ಚಿನ್ನಾಭರಣ ಖರೀದಿಸಿದ್ದರ ಬಗ್ಗೆ ದಾಖಲೆಗಳು ಸಿಕ್ಕಿದ್ದವು ಎನ್ನಲಾಗಿತ್ತು. ಈ ಕುರಿತಾಗಿಯೂ ನರೇಶ್ ಪತ್ನಿಯನ್ನು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...