alex Certify ಸಿದ್ದರಾಮಯ್ಯನವರ ಕಾರ್ಯವನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಪ್ರತಾಪ್ ಸಿಂಹ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯನವರ ಕಾರ್ಯವನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಪ್ರತಾಪ್ ಸಿಂಹ..!

ಪಾರಂಪರಿಕ ಶೈಲಿಯಲ್ಲಿ ನೋಡುಗರನ್ನು ಸೆಳೆಯುತ್ತಿರುವ ಮೈಸೂರು ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಇಂದು ಉದ್ಘಾಟನೆಗೊಂಡಿದೆ. ಕಟ್ಟಡ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದ್ದಾರೆ. ಈ ಕಟ್ಟಡ ನಿರ್ಮಾಣದ ಕುರಿತು ಇಂದು ಪ್ರತಾಪ್ ಸಿಂಹ ಮಾತನಾಡಿದ್ದಾರೆ.

ಹೌದು, ಸುಮಾರು, 19ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ಭುತ ಹಾಗೂ ಸುಸಜ್ಜಿತವಾಗಿ ಪೊಲೀಸ್ ಕಮಿಷನರ್ ಕಚೇರಿ ನಿರ್ಮಾಣವಾಗಿದೆ. ಈ ಕಟ್ಟಡ ನಿರ್ಮಾಣವಾಗೋದಿಕ್ಕೆ ಸಿದ್ದರಾಮಯ್ಯರವರೇ ಕಾರಣವಂತೆ. ಹೀಗಂತ ಪ್ರತಾಸ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅಧಿಕಾರದ ಸ್ಥಾನದಲ್ಲಿ ಪಲ್ಲಟ ಸಹಜ, ಆದರೆ ಆಡಳಿತ ನಿರಂತರ. ಹೌದು ನಿನ್ನೆ ಮೈಸೂರಿನಲ್ಲಿ ಉದ್ಘಾಟನೆ ಮಾಡಿದ ಕಮಿಷನರ್ ಕಚೇರಿಯನ್ನು ಮಂಜೂರು ಮಾಡಿ, ಶಂಕುಸ್ಥಾಪನೆ ಮಾಡಿದ್ದು ಸಿದ್ದರಾಮಯ್ಯ ಸಾಹೇಬರು. ಸಂಸದನಾಗಿ ನಾನು ಪಾಲ್ಗೊಂಡ ಮೊದಲ ಸರ್ಕಾರಿ ಕಾರ್ಯಕ್ರಮವೂ ಅದಾಗಿತ್ತು. ಖಂಡಿತ ನೆನಪು ಮಾಡಿಕೊಳ್ಳುತ್ತಿದ್ದೆ, ಭಾಷಣ ಮಾಡುವ ಅವಕಾಶ ನನಗೆ ಸಿಗಲಿಲ್ಲ. ಉಸ್ತುವಾರಿ ಸಚಿವರಿಗೆ ಸಿದ್ದರಾಮಯ್ಯ ಸಾಹೇಬರ ಹೆಸರು ಹೇಳಿ ಅಂದಿದ್ದೆ, ವಿಳಂಬದಿಂದಾಗಿ ಅವರೂ ಭಾಷಣ ಮಾಡಲಿಲ್ಲ. ಅನ್ಯಥಾ ಭಾವಿಸಬೇಡಿ ಎಂದು ಬರೆದುಕೊಂಡಿದ್ದಾರೆ.

https://www.facebook.com/MPPratapSimha/photos/a.1408610526065968/2789397844653889

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...