alex Certify ಸಿದ್ದರಾಮಯ್ಯನವರ ಪ್ರೀ ಪ್ಲ್ಯಾನ್ ನಿಂದ ನಾನು ಟ್ರ್ಯಾಪ್ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯನವರ ಪ್ರೀ ಪ್ಲ್ಯಾನ್ ನಿಂದ ನಾನು ಟ್ರ್ಯಾಪ್ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ನವರ ಸಹವಾಸ ಮಾಡಿ ನಾವು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಮತ್ತು ಟೀಂ ನನ್ನ 12 ವರ್ಷಗಳ ಗುಡ್ ವಿಲ್ ನ್ನು ಹಾಳು ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಮ್ಮ ಕುಟುಂಬಕ್ಕೆ ಶಾಪವಿದೆ. ನಾವು ಬೆಳೆಸಿದವರೇ ನಮ್ಮ ವಿರುದ್ಧ ಮಾತನಾಡುತ್ತಾರೆ. ಶಾಪ ವಿಮೋಚನೆ ಹೇಗೆ ಎಂದು ಕಂಡುಹಿಡಿಯಬೇಕು. ಸಿದ್ದರಾಮಯ್ಯ ಪ್ರೀ ಪ್ಲ್ಯಾನ್ ಮಾಡಿ ನನ್ನ ಟ್ರ್ಯಾಪ್ ಮಾಡಿದರು. ಹೀಗಾಗಿ ನಾನು ಸಿಎಂ ಸ್ಥಾನ ಕಳೆದುಕೊಂಡೆ. ಸಿದ್ದರಾಮಯ್ಯನವರ ಎಮೋಷನಲ್ ಟ್ರ್ಯಾಪ್ ಗೆ ನಾವು ಬಲಿಯಾದೆವು ಎಂದು ಆರೋಪಿಸಿದರು.

ಸಿದ್ದರಾಮಯ್ಯ ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ನಮ್ಮ ಪಕ್ಷವನ್ನು ಬಿ ಟೀಂ ಎಂದು ಪದೇ ಪದೇ ಹೇಳಿ ಬಿಜೆಪಿಗೆ ಹೆಚ್ಚು ಸ್ಥಾನ ಬರುವಂತೆ ಮಾಡಿದರು. ನನ್ನ ಹೆಸರು ಹಾಳು ಮಾಡುವ ಹುನ್ನಾರ ನಡೆಸಿದರು. ಕಾಂಗ್ರೆಸ್ ನವರ ಸಹವಾಸ ಮಾಡಿ, ದೇವೇಗೌಡರ ಮಾತು ಕಟ್ಟಿಕೊಂಡು ಅಂದರೆ ದೇವೇಗೌಡರಿಗೆ ಅವರದ್ದೇ ಆದ ಕಮಿಟ್ ಮೆಂಟ್ ಇತ್ತು. ಹಾಗಾಗಿ ಅವರ ಮನಸ್ಸಿಗೆ ನೋವಾಗಬಾರದೆಂದು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಆದರೆ ಸಿದ್ದರಾಮಯ್ಯ ಹಾಗೂ ಟೀಂ ನಮ್ಮನ್ನೇ ಸರ್ವನಾಶ ಮಾಡಿದರು ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...