alex Certify ಸಿದ್ದರಾಮಯ್ಯ ಹೇಳಿಕೆಗಳಿಗೆ ಕಾಂಗ್ರೆಸ್ಸಿಗರಿಂದಲೇ ವಿರೋಧ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಹೇಳಿಕೆಗಳಿಗೆ ಕಾಂಗ್ರೆಸ್ಸಿಗರಿಂದಲೇ ವಿರೋಧ…?

ಇತ್ತೀಚೆಗೆ ಸಿದ್ದರಾಮಯ್ಯನವರ ಒಂದೊಂದು ಹೇಳಿಕೆಗಳು ಕೂಡ ವಿವಾದ ಸೃಷ್ಟಿ ಮಾಡುತ್ತಿವೆ. ವಿಧಾನಸಭೆಯಲ್ಲಿ ದನದ ಮಾಂಸ ತಿನ್ನುವ ವಿಚಾರವಾಗಿ ನೀಡಿದ್ದ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಹನುಮ ಜಯಂತಿಯ ದಿನ ಮಾಂಸಹಾರ ಸೇವಿಸುವ ಕುರಿತು ವಿಡಿಯೋ ವೈರಲ್ ಆಗಿತ್ತು. ಇದೀಗ ಇಂತಹ ಹೇಳಿಕೆಗಳೇ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿವೆ ಎನ್ನಲಾಗಿದೆ.

ಸಿದ್ದರಾಮಯ್ಯರ ಇಂತಹ ಹೇಳಿಕೆಗಳಿಂದಲೇ ಕಾಂಗ್ರೆಸ್ ಸೋಲು ಅನುಭವಿಸುತ್ತಿದೆ. ಇಂತಹ ಹೇಳಿಕೆಗಳಿಗೆ ಬ್ರೇಕ್ ಹಾಕಿಸಿ ಎಂದು ಕೆಲ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯರ ಹೇಳಿಕೆಗಳಿಂದ ಬಿಜೆಪಿಗೆ ನಷ್ಟವಾಗುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಅವರ ಹೇಳಿಕೆಗಳು ಬಿಜೆಪಿ ವಿರುದ್ಧವಾಗಿದ್ದರೂ ಅವು ಹಿಂದುಗಳ ಧಾರ್ಮಿಕ ಭಾವನೆಯನ್ನು ಕೆಣಕುತ್ತಿವೆ. ಈ ರೀತಿಯ ಹೇಳಿಕೆಗಳಿಂದಲೇ ಅನೇಕ ಸಮುದಾಯಗಳು ದೂರ ಹೋಗಿವೆ. ಇದು ಹೀಗೆ ಮುಂದುವರೆದರೆ ಮುಂದೊಂದು ದಿನ ಕಾಂಗ್ರೆಸ್ ನೆಲಕಚ್ಚಿ ಹೋಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...