alex Certify ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ: ಪಲಿಮಾರು ಶ್ರೀಗಳಿಗೆ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ: ಪಲಿಮಾರು ಶ್ರೀಗಳಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದ ಪಲಿಮಾರು ಶ್ರೀಗಳಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ಸ್ವಾಮೀಜಿಗಳು ರಾಜಕೀಯ ಮಾತನಾಡುವಂತಾಗಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸ್ವಾಮೀಜಿಗಳೆಲ್ಲರೂ ಇತ್ತೀಚೆಗೆ ರಾಜಕಾರಣಿಗಳಾಗುತ್ತಿದ್ದಾರೆ. ಧಾರ್ಮಿಕ ವಿಷಯಗಳಿಗೆ ಸೀಮಿತಗೊಳ್ಳದೇ ರಾಜಕಾರಣದ ಮಾತನ್ನು ಆಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪೊಲೀಸರ ವಶಕ್ಕೆ

ಇದೇ ವೇಳೆ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಈ ವಿಷಯ ಅಧ್ಯಕ್ಷರಿಗೆ ಬಿಟ್ಟಿದ್ದೇನೆ. ಅವರೆ ಇದನ್ನು ನೋಡಿಕೊಳ್ಳಲಿದ್ದಾರೆ. ಹಾಗಾಗಿ ನಾನು ಆ ಬಗ್ಗೆ ಏನನ್ನೂ ಮಾತನಾಡುವುದಿಲ್ಲ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...