alex Certify ಹಿಂದಿನ ದಿನವೇ ‘ಚಿರಂಜೀವಿ ಸರ್ಜಾ’ಗೆ ಕಾಣಿಸಿಕೊಂಡಿತ್ತು ಎದೆನೋವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದಿನ ದಿನವೇ ‘ಚಿರಂಜೀವಿ ಸರ್ಜಾ’ಗೆ ಕಾಣಿಸಿಕೊಂಡಿತ್ತು ಎದೆನೋವು

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ತಮ್ಮ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಇಡೀ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಂದೆರಗಿದಂತಾಗಿದೆ. ನೆಚ್ಚಿನ ನಟನನ್ನು ಕಳೆದುಕೊಂಡು ಅಭಿಮಾನಿಗಳು ಸಹ ದುಃಖತಪ್ತರಾಗಿದ್ದಾರೆ.

ಲಾಕ್ ಡೌನ್ ಕಾರಣಕ್ಕೆ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಚಿತ್ರರಂಗದ ಚಟುವಟಿಕೆಗಳು ಸ್ತಬ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದ ಚಿರಂಜೀವಿ ಸರ್ಜಾ ಅವರಿಗೆ ಶನಿವಾರ ಸಂಜೆಯೇ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಆದರೆ ಈ ಹಿಂದೆ ಯಾವುದೇ ಸಮಸ್ಯೆ ಇರದಿದ್ದ ಕಾರಣ ಇದನ್ನು ಚಿರಂಜೀವಿ ಸರ್ಜಾ ಗಂಭೀರವಾಗಿ ಪರಿಗಣಿಸಿರಲಿಲ್ಲವೆನ್ನಲಾಗಿದ್ದು, ಆದರೂ ಪತ್ನಿಯ ಒತ್ತಾಯಕ್ಕೆ ಮಣಿದು ಭಾನುವಾರದಂದು ವೈದ್ಯರ ಬಳಿ ಅಪಾಯಿಂಟ್ಮೆಂಟ್ ಪಡೆದಿದ್ದಾರೆಂದು ಹೇಳಲಾಗಿದೆ.

ಆದರೆ ವೈದ್ಯರ ಬಳಿ ತೆರಳುವ ಮುನ್ನವೇ ಮನೆಯಲ್ಲಿ ಹೃದಯಾಘಾತವಾಗಿದ್ದು, ಕುಸಿದುಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಚಿಕ್ಕ ವಯಸ್ಸಿನಲ್ಲೇ ಬಾರದ ಲೋಕಕ್ಕೆ ಚಿರಂಜೀವಿ ತೆರಳಿದ್ದು, ಇಂದು ಮಧ್ಯಾಹ್ನ ಸಹೋದರ ಧ್ರುವ ಸರ್ಜಾ ಅವರ ಫಾರಂ ಹೌಸ್ ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...