ಈ ಮೊದಲು ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಹೊರ ಜಿಲ್ಲೆಗೆ ತೆರಳುವವರು ಪಾಸ್ ಪಡೆಯುವುದು ಕಡ್ಡಾಯವಾಗಿತ್ತು. ಇದೀಗ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಹಲವು ಸಡಿಲಿಕೆಗಳನ್ನು ಮಾಡಲಾಗಿದೆ.
ಇದರಲ್ಲಿ ಅಂತರ್ ಜಿಲ್ಲೆ ಸಂಚಾರವೂ ಒಳಗೊಂಡಿದ್ದು, ಹೊರ ಜಿಲ್ಲೆಗೆ ತೆರಳುವರು ಯಾವುದೇ ಪಾಸ್ ಪಡೆಯುವ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಆದರೆ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ಇದನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.