alex Certify ‘ಹೋಟೆಲ್’ ಮಾಲೀಕರುಗಳಿಗೆ ಸಂತಸದ ಸುದ್ದಿ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೋಟೆಲ್’ ಮಾಲೀಕರುಗಳಿಗೆ ಸಂತಸದ ಸುದ್ದಿ ನೀಡಿದ ಸಿಎಂ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಆಟಾಟೋಪ ತೋರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ಈವರೆಗೆ ವ್ಯಾಪಾರ – ವಹಿವಾಟುಗಳು, ಉದ್ದಿಮೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು.

ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲೇ ಹೋಟೆಲ್ ನಡೆಸಲು ಅನುಮತಿ ನೀಡಿದ್ದ ರಾಜ್ಯ ಸರ್ಕಾರ ಕೇವಲ ಪಾರ್ಸೆಲ್ ಮಾತ್ರ ನೀಡಬೇಕೆಂದು ಸೂಚಿಸಿತ್ತು. ಅಲ್ಲದೆ ಸಂಜೆ 6.30 ರವರೆಗೆ ವ್ಯಾಪಾರ ನಡೆಸಬೇಕೆಂದು ಆದೇಶಿಸಲಾಗಿತ್ತು. ಈಗ ಆ ಆದೇಶದಲ್ಲಿ ಮಾರ್ಪಾಡು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಹೋಟೆಲ್ ಉದ್ಯಮಿಗಳು ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಭರವಸೆ ನೀಡಿದ್ದು, ಕೆಂಪು ವಲಯವನ್ನು ಹೊರತುಪಡಿಸಿ ಇತರೆ ವಲಯಗಳಲ್ಲಿ ರಾತ್ರಿ 10 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುವು ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಈ ಕುರಿತ ಆದೇಶ ಒಂದೆರಡು ದಿನಗಳ ಒಳಗಾಗಿ ಹೊರಬೀಳಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...