alex Certify Shocking News: ರಸ್ತೆ ಮೇಲೆ ಹೊಸ ವರ್ಷದ ಶುಭಾಷಯ ಬರೆಯಲು ಹೋಗಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ರಸ್ತೆ ಮೇಲೆ ಹೊಸ ವರ್ಷದ ಶುಭಾಷಯ ಬರೆಯಲು ಹೋಗಿ ದುರಂತ

ಉಡುಪಿ: ಕೊರೊನಾ ಸಂಕಷ್ಟದ ನಡುವೆಯೇ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಭೀಕರ ಘಟನೆ ಉಡುಪಿಯಲ್ಲಿ ನಡೆದಿದೆ.

ಶರಣ್ ಹಾಗೂ ಸಿದ್ದು ಮೃತ ದುರ್ದೈವಿಗಳು. ಹೊಸ ವರ್ಷಕ್ಕೆ ಶುಭ ಸಂದೇಶವನ್ನು ರಸ್ತೆ ಮೇಲೆ ಬರೆಯಲು ಮುಂದಾದಾಗ ವೇಗವಾಗಿ ಬಂದ ಕಾರು ಯುವಕರಿಗೆ ಡಿಕ್ಕಿ ಹೊಡೆದಿದೆ. ಓರ್ವ ಸ್ಥಳದಲ್ಲೇ ಅಸುನೀಗಿದ್ದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಶರಣ್ ಹಾಗೂ ಸಿದ್ದು, ಟಿಪ್ಪರ್ ಡ್ರೈವರ್ ಗಳಾಗಿದ್ದು, ಮೂಲತ: ಬಾಗಲಕೋಟೆಯವರು. ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ರಸ್ತೆ ಮೇಲೆ ಹ್ಯಾಪಿ ನ್ಯೂ ಇಯರ್ ಬರೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...