alex Certify 5 ಸಾವಿರ ರೂ. ಪರಿಹಾರ ಧನ ಪಡೆಯಲು ಆಟೋ-ಟ್ಯಾಕ್ಸಿ ಚಾಲಕರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಸಾವಿರ ರೂ. ಪರಿಹಾರ ಧನ ಪಡೆಯಲು ಆಟೋ-ಟ್ಯಾಕ್ಸಿ ಚಾಲಕರಿಗೆ ಇಲ್ಲಿದೆ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದ ವೇಳೆ ಕೆಲಸವಿಲ್ಲದೆ ಕಂಗೆಟ್ಟಿದ್ದ ಆಟೋ – ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂಪಾಯಿ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಪರಿಹಾರ ಧನ ಪಡೆಯಲು ಚಾಲಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹ ಆಟೋ – ಟ್ಯಾಕ್ಸಿ ಚಾಲಕರ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿ ಮಾಡಲಾಗುತ್ತದೆ.

ಮಾರ್ಚ್ 24ಕ್ಕೆ ಚಾಲ್ತಿಯಲ್ಲಿರುವ ವಾಹನ ಚಾಲನಾ ಪತ್ರ ಹೊಂದಿರುವ ಚಾಲಕರು ಪರಿಹಾರ ಧನ ಪಡೆಯಲು ಅರ್ಹರಾಗಿದ್ದು, ತಮ್ಮ ಹೆಸರು, ವಿಳಾಸ, ಆಧಾರ್ ಸಂಖ್ಯೆ, ಚಾಲನಾ ಪರವಾನಿಗೆ ಪತ್ರ, ವಾಹನ ವಿವರದ ಜೊತೆಗೆ ಬ್ಯಾಂಕ್ ಖಾತೆ ಸಂಖ್ಯೆ, ಐಎಫ್ಎಸ್ಸಿ ಕೋಡ್, ಎಂಐಸಿಆರ್ ಕೋಡ್ ಮಾಹಿತಿ ನೀಡಬೇಕಿದೆ.

ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ರಾಜ್ಯದ ಸುಮಾರು 7.75 ಲಕ್ಷ ಮಂದಿ ಆಟೋ – ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ ಲಭ್ಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...