ಬೆಂಗಳೂರು: ಆಧಾರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಪಡಿತರ ಚೀಟಿ ಇಲ್ಲದವರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿ ಪಡೆಯಬಹುದಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 4 ಸಾವಿರ ಮಂದಿ ಆಟೋ ಚಾಲಕರು, ಬಸ್ ಚಾಲಕರು, ಲಾರಿ ಚಾಲಕರಿಗೆ ಉಚಿತವಾಗಿ ಆಹಾರದ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡಿದರು.
ಪಡಿತರ ಚೀಟಿ ಇಲ್ಲದವರಿಗೆ ಮೇ 26 ರಿಂದ 31 ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸಲಿದ್ದು, ಪಡಿತರ ಚೀಟಿ ಇಲ್ಲದವರು ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಜೂನ್ 1 ರಿಂದ 10 ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಪ್ರತಿ ಕುಟುಂಬದವರಿಗೆ 2 ಕೆಜಿ ಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.