alex Certify ಮಾನವೀಯತೆ ಮೆರೆದ ಸಚಿವ ಕೆ. ಗೋಪಾಲಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಸಚಿವ ಕೆ. ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆ ಹಿರೀಸಾವೆ ಸಮೀಪ ಅಪಘಾತದಲ್ಲಿ ಗಾಯಗೊಂಡ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಲು ಸಚಿವ ಕೆ. ಗೋಪಾಲಯ್ಯ ನೆರವಾಗಿದ್ದಾರೆ.

ಬೆಂಗಳೂರಿನಿಂದ ಹಾಸನಕ್ಕೆ ಸಚಿವ ಗೋಪಾಲಯ್ಯ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣ -ಹಿರೀಸಾವೆ ಸಮೀಪದ ಗೂಳಿಹೊನ್ನೇನಹಳ್ಳಿ ಬಳಿ ಕಾರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ದಂಪತಿ ಗಾಯಗೊಂಡಿದ್ದಾರೆ. ಇದನ್ನು ಗಮನಿಸಿದ ಸಚಿವರು ಸಾರ್ವಜನಿಕರ ನೆರವಿನಿಂದ ಕಾರಿನಲ್ಲಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಬಳಿಕ ಅವರಿಗೆ ಊರಿಗೆ ಹೋಗಲು ಬದಲಿ ವಾಹನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದ ದಂಪತಿ ಅಪಘಾತದಲ್ಲಿ ಗಾಯಗೊಂಡಿದ್ದು, ಈ ಸಂಬಂಧ ಚನ್ನರಾಯಪಟ್ಟಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...