ಬೆಂಗಳೂರು: ಕೃಷಿಕರ ಮಕ್ಕಳಿಗೆ ಕೃಷಿ ಪದವಿಗೆ ರೈತರ ಕೋಟಾ ಅಡಿ ಅವಕಾಶ ಕಲ್ಪಿಸಲು ಕೃಷಿ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ.
ವಿಕಾಸಸೌಧದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೃಷಿ ಪದವಿಗೆ ಕೃಷಿಕರ ಮಕ್ಕಳಿಗೆ ಪ್ರವೇಶ ನೀಡಲು ಚರ್ಚೆ ನಡೆಸಲಾಗಿದೆ. ಪಿಯುಸಿ ಮತ್ತು ಸಿಇಟಿಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕ ಮತ್ತು ರ್ಯಾಂಕಿಂಗ್ ಆಧರಿಸಿ ರೈತರ ಮಕ್ಕಳಿಗೆ ಸೀಟು ಕೊಡುವ ಪದ್ಧತಿ ಜಾರಿಗೆ ತರಲಾಗುವುದು. ಇದರಿಂದ ವಿದ್ಯಾರ್ಥಿಗಳು ಕೃಷಿ ಪದವಿ ವಿದ್ಯಾರ್ಥಿ ಅನುಕೂಲವಾಗುತ್ತದೆ ಎನ್ನುವ ಅಭಿಪ್ರಾಯ ಕೃಷಿ ತಜ್ಞರಿಂದ ಕೇಳಿಬಂದಿದೆ ಎನ್ನಲಾಗಿದೆ.
ರೈತರ ಮಕ್ಕಳಿಗೆ ರಯತರ ಕೋಟಾದಡಿ ಸೀಟು ಕೊಡುವ ಪದ್ಧತಿ ಜಾರಿಗೆ ತರಲಾಗುವುದು. ಪ್ರಸ್ತುತ ರೈತರ ಕೋಟಾದಡಿ ಕೃಷಿ ಪದವಿ ಸೀಟು ಪಡೆಯಲು ಪಿಯುಸಿ ಅಂಕ, ಸಿಇಟಿ ಮತ್ತು ಪ್ರಾಯೋಗಿಕ ಪರೀಕ್ಷೆ ಅಂಕಗಳನ್ನು ಪರಿಗಣಿಸಲಾಗುತ್ತದೆ. ರೈತರ ಮಕ್ಕಳಿಗೆ ಕೃಷಿ ಚಟುವಟಿಕೆ ಬಗ್ಗೆ ತಿಳಿದಿದ್ದರೂ ಪರೀಕ್ಷೆಗಳಲ್ಲಿ ಸ್ಪರ್ಧೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿಕರ ಮಕ್ಕಳಿಗೆ ರೈತರ ಕೋಟಾದಡಿ ಕೃಷಿ ಪದವಿಗೆ ಪ್ರವೇಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.