alex Certify ಗಮನಿಸಿ: 4 ತಿಂಗಳು ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: 4 ತಿಂಗಳು ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೂ.15 ರಿಂದ ಅಕ್ಟೋಬರ್ 15ರವರೆಗೆ 12 ಟನ್‍ಗಿಂತ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ರಾಷ್ಟ್ರಿಯ ಹೆದ್ದಾಗಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಸಾರಿಗೆ ಅಧಿಕಾರಿಗಳ ವರದಿಯಂತೆ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಅಧಿಕ ಭಾರದ ವಾಹನಗಳು ಪರ್ಯಾಯವಾಗಿ ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗವಾಗಿ ಮತ್ತು ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...