ಬೆಂಗಳೂರು: ಮೇ 31 ರವರೆಗೆ ಲಾಕ್ ಡೌನ್ 4 ಜಾರಿಯಲ್ಲಿದ್ದರೂ ಕೆಲವೊಂದು ವಿನಾಯಿತಿಗಳನ್ನು ನೀಡಲಾಗಿದೆ. ರೈಲು, ಬಸ್, ಆಟೋ, ಕ್ಯಾಬ್ ಸೇವೆಗಳನ್ನು ಆರಂಭಿಸಲಾಗಿದೆ.
ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸೋಮವಾರ ಬೆಳಗ್ಗೆ 7 ಗಂಟೆಯಿಂದ ಚಟುವಟಿಕೆಗಳು ಮತ್ತೆ ಆರಂಭವಾಗಲಿವೆ. ದೇಶದಲ್ಲಿ ಮೇ 25 ರಿಂದ ವಿಮಾನಯಾನ ಆರಂಭಕ್ಕೆ ಅವಕಾಶ ನೀಡಲಾಗಿದೆ. ದೇಶೀಯ ವಿಮಾನಯಾನ ಸಂಚಾರ ನಾಳೆಯಿಂದ ಆರಂಭವಾಗಲಿದ್ದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ನಿಯಮಾನುಸಾರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು. ಮೇ 25 ರಿಂದ ಜೂನ್ 30 ರವರೆಗೆ ಶೇಕಡ 32 ರಷ್ಟು ವಿಮಾನಗಳು ಹಾರಾಟ ನಡೆಸಲಿವೆ. ಮಾಸ್ಕ್ ಧರಿಸಬೇಕು. ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಹೀಗೆ ಹಲವು ನಿಯಮಗಳೊಂದಿಗೆ ವಿಮಾನಯಾನಕ್ಕೆ ಅವಕಾಶ ನೀಡಿದ್ದು ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.