ಬೆಂಗಳೂರು: ವಿರೋಧ ಪಕ್ಷಗಳು, ರೈತ ಸಂಘಟನೆಗಳ ವಿರೋಧದ ನಡುವೆಯೂ ರಾಜ್ಯ ಕೃಷಿ ಉತ್ಪನ್ನಗಳ ಮಾರಾಟ ಮಸೂದೆ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ.
ಎಪಿಎಂಸಿಗಳಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಕೆಂಪು ಹಾಸು ಹಾಸಲಾಗಿದೆ. ಮಂಗಳವಾರ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಸಂಪುಟದ ಒಪ್ಪಿಗೆ ನಂತರ ಕಳಿಸುವಂತೆ ವಾಪಸ್ ಕಳಿಸಿದ್ದು, ಸಂಪುಟದಲ್ಲಿ ಸುದೀರ್ಘ ಚರ್ಚೆಯ ಬಳಿಕ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ.
ಇದೀಗ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು ಎಪಿಎಂಸಿ ಕಾಯ್ದೆ ಸುಗ್ರಿವಾಜ್ಞೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯಪಾಲರ ಸೂಚನೆಯಂತೆ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದ್ದು, ಮತ್ತೆ ರಾಜ್ಯಪಾಲರಿಗೆ ಕಳಿಸಲಾಗುವುದು ಎಂದು ಹೇಳಲಾಗಿದೆ.