ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಕೈಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ.
ನೆಲ್ಲಿಹುದಿಕೇರಿ ಬೆಟ್ಟದಕಾಡು ಬಳಿ ಘಟನೆ ನಡೆದಿದ್ದು ದೀಪಕ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಪ್ರಕರಣದಲ್ಲಿ ಬಂಧಿತನಾಗಿದ್ದ ದೀಪಕ್ ಜಾಮೀನು ಪಡೆದು ಹೊರಬಂದಿದ್ದ. ಈಗ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಂಧಿತನಾಗಿದ್ದಾನೆ.
ಇನ್ನು ದೀಪಕ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬೆಟ್ಟದಕಾಡಿನ ಬಶೀರ್, ಜಾಬೀರ್ ಮತ್ತು ನಜೀಬ್ ಎಂಬವರನ್ನು ಸಿದ್ಧಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.