alex Certify ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್

ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿರುವುದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ ಅಧಿಕಾರಿಗಳ ಸಭೆಯ ವಿವರ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ಧಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎನ್ನುವ ವಿವರವನ್ನು ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನೀಡಿದ ಒಂದು ಕೋಟಿ ರೂಪಾಯಿಯ ಪರಿಹಾರದ ಲೆಕ್ಕವನ್ನು ಸಂತೋಷ್ ಅವರು ಹೇಳಿದ್ದಾರೆ. ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ಪ್ರಧಾನಿ ನರೇಂದ್ರ ಮೋದಿ ಜಮೆ ಮಾಡಿದ 15 ಲಕ್ಷ ರೂಪಾಯಿ ಲೆಕ್ಕಕೊಡಿ. ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದ ಪಿಎಂ ಕೇರ್ಸ್ ನಿಧಿಯ ಲೆಕ್ಕ ಕೊಡಿ ಎಂದು ಒತ್ತಾಯಿಸಿದ್ದಾರೆ.

ಚೀನಾ ಸೇನೆ ಎರಡು ಕಿಲೋಮೀಟರ್ ಹಿಂದೆ ಸರಿದಿದೆ ಎಂದು ಸಂತೋಷ್ ಹೇಳಿದ್ದಾರೆ. ಅವರೇನು ರಕ್ಷಣಾ ಸಚಿವರೇ? ಇಲ್ಲವೇ ಸೇನಾಮುಖ್ಯಸ್ಥರೇ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಚೀನಾ ಒಳಗೆ ನುಸುಳಿಲ್ಲ ಎಂದಾದರೆ ಹಿಂದೆ ಸರಿದಿದ್ದು ಎಲ್ಲಿಂದ ಎನ್ನುವುದನ್ನು ತಿಳಿಸಲಿ ಎಂದು ಸವಾಲ್ ಹಾಕಿದ್ದಾರೆ.

ಯಡಿಯೂರಪ್ಪನವರಿಗೆ ನೀವು ನೀಡಿರುವ ಶಹಬ್ಬಾಸ್ ಗಿರಿ ಮನಸ್ಸಿನಿಂದ ಬಂದಿದ್ದೆ ಅಥವಾ ನಾಲಿಗೆಯಿಂದ ಬಂದಿದ್ದೆ? ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹೋದ್ಯೋಗಿಗಳನ್ನು ಎತ್ತಿ ಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಬ್ಬಾಸ್ ಗಿರಿ ಕೊಡಬಹುದೇನೋ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...