ಬೆಂಗಳೂರು: ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು.
ಕಂದಾಯ ಸಚಿವ ಆರ್. ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು ಅಕ್ರಮ ಭೂಮಿಯನ್ನು ಸಕ್ರಮ ಮಾಡಿಕೊಳ್ಳಲು ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ.
ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 ರ ಅಡಿ ಅರ್ಜಿ ಸಲ್ಲಿಸುವ ಅವಧಿ ಮುಕ್ತಾಯವಾಗಿದೆ. ರೈತರಿಂದ ಅವಧಿ ವಿಸ್ತರಣೆಗೆ ಮನವಿ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.