alex Certify ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ಸುಪಾರಿ ಕಿಲ್ಲರ್ಸ್ ಗಳ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ಸುಪಾರಿ ಕಿಲ್ಲರ್ಸ್ ಗಳ ಮೇಲೆ ಫೈರಿಂಗ್

ಬೆಂಗಳೂರು: ಇಬ್ಬರು ಸುಪಾರಿ ಕಿಲ್ಲರ್ಸ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುಪಾರಿ ಕಿಲ್ಲರ್ಸ್ ಗಳಾದ ಭರತ್ ಮತ್ತು ಅರುಣ್ ಅವರ ಮೇಲೆ ಫೈರಿಂಗ್ ಮಾಡಲಾಗಿದೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜಶೇಖರ್ ಅವರ ಕೊಲೆಗೆ 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದ ಆರೋಪಿಗಳು ಒಂದರ ನಂತರ ಮತ್ತೊಂದು ಸೇರಿ 3 ಕೊಲೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದರು.

ಆರೋಪಿಗಳ ಬಂಧನಕ್ಕೆ ತೆರಳಿದ್ದಾಗ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಸೋಲದೇವನಹಳ್ಳಿ ಇನ್ಸ್ ಪೆಕ್ಟರ್ ಶಿವಸ್ವಾಮಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...