alex Certify ಬೆಂಗಳೂರಲ್ಲಿ ಹಾಡಹಗಲೇ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ: ಕಂಡ ಕಂಡವರಿಗೆಲ್ಲ ಚಾಕುವಿನಿಂದ ಇರಿದ ದುಷ್ಕರ್ಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಹಾಡಹಗಲೇ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ: ಕಂಡ ಕಂಡವರಿಗೆಲ್ಲ ಚಾಕುವಿನಿಂದ ಇರಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎದುರಿಗೆ ಬಂದವರನ್ನೆಲ್ಲ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಒಬ್ಬರು ಸಾವನ್ನಪ್ಪಿದ್ದಾರೆ.

ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಗಣೇಶ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಂಸ ತರಲು ಅಂಗಡಿಗೆ ಹೋಗಿದ್ದ ಆರೋಪಿ ಅಂಗಡಿಯಲ್ಲಿದ್ದ ಚಾಕು ತೆಗೆದುಕೊಂಡು ಕಂಡಕಂಡವರಿಗೆಲ್ಲ ಇರಿದಿದ್ದಾನೆ. ಇದರಿಂದಾಗಿ 8 ಮಂದಿ ಗಾಯಗೊಂಡಿದ್ದಾರೆ ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. 36 ವರ್ಷದ ಮಾರುತಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗಣೇಶ್ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...