alex Certify ಕರೆ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದ ಯುವತಿ, ಆಮೇಲೇನಾಯ್ತು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರೆ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದ ಯುವತಿ, ಆಮೇಲೇನಾಯ್ತು ಗೊತ್ತಾ..?

ಬೆಂಗಳೂರು: ಪ್ರೀತಿಸುವ ನಾಟಕವಾಡಿ ಯುವಕರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡವನ್ನು ಆನೇಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುನೀಂದ್ರ, ನಾಗೇಶ್, ನವೀನ್, ಶಶಾಂಕ್, ಅಣ್ಣಮ್ಮ ಬಂಧಿತ ಆರೋಪಿಗಳೆಂದು ಹೇಳಲಾಗಿದೆ. ಇವರು ಯುವಕರಿಗೆ ಯುವತಿಯರಿಂದ ಕರೆ ಮಾಡಿಸಿ ಪ್ರೀತಿಸುವ ನಾಟಕವಾಡಿಸುತ್ತಿದ್ದರು. ಬಳಿಕ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಬೆದರಿಸಿ ಸುಲಿಗೆ ಮಾಡುತ್ತಿದ್ದರು.

ಇದೇ ರೀತಿ ಕಿರಣ್ ಎಂಬ ಯುವಕನಿಗೆ ಯುವತಿಯಿಂದ ಕರೆ ಬಂದಿದ್ದು ಪ್ರೀತಿ-ಪ್ರೇಮದ ನಾಟಕವಾಡಿದ್ದಾಳೆ. ಬಳಿಕ ಕರೆಮಾಡಿ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಆಗ ಎಂಟ್ರಿಕೊಟ್ಟ ಗ್ಯಾಂಗ್ ಸದಸ್ಯರು ಕಿರಣ್ ನನ್ನು ಬೆದರಿಸಿ ಸುಲಿಗೆ ಮಾಡಿದ್ದಾರೆ. ಕಿರಣ್ ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದು ಕಾರ್ಯಾಚರಣೆ ಕೈಗೊಂಡ ಪೊಲೀಸರು ತಂಡವನ್ನು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...