alex Certify ಗಮನಿಸಿ…! ಅನಗತ್ಯವಾಗಿ ಓಡಾಡುವವರ ವಾಹನ ಸೀಜ್, ಲಾಕ್ಡೌನ್ ಮುಗಿಯುವವರೆಗೆ ಸಿಗಲ್ಲ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಅನಗತ್ಯವಾಗಿ ಓಡಾಡುವವರ ವಾಹನ ಸೀಜ್, ಲಾಕ್ಡೌನ್ ಮುಗಿಯುವವರೆಗೆ ಸಿಗಲ್ಲ ವಾಹನ

ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14ರ ಮಂಗಳವಾರ ರಾತ್ರಿಯಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಈ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಜಪ್ತಿ ಮಾಡಲಾಗುವುದು. ಲಾಕ್ಡೌನ್ ಮುಗಿಯುವವರೆಗೆ ವಾಹನಗಳನ್ನು ಬಿಡುವುದಿಲ್ಲ. ಅಗತ್ಯ ವಸ್ತು ಪೂರೈಕೆ ಮತ್ತು ತುರ್ತು ಸೇವೆಗೆ ಮಾತ್ರ ರಿಯಾಯಿತಿ ನೀಡಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಭದ್ರತೆ ಒದಗಿಸಿ ಸಂಚಾರ ಬಂದ್ ಮಾಡಲಾಗುವುದು. ಆರೋಗ್ಯ ಸೇವೆ, ಸರ್ಕಾರಿ ವಾಹನ ತುರ್ತು ವಾಹನಗಳಿಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಅನಗತ್ಯವಾಗಿ ರಸ್ತೆಗಿಳಿಯುವ ವಾಹನ ಜಪ್ತಿ ಮಾಡಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...