alex Certify BIG NEWS: ಸಿಎಂ ಬಿ ಎಸ್ ವೈ ವಿರುದ್ಧ ಗುಡುಗಿದ ಹೆಚ್.ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬಿ ಎಸ್ ವೈ ವಿರುದ್ಧ ಗುಡುಗಿದ ಹೆಚ್.ವಿಶ್ವನಾಥ್

ಬೆಂಗಳೂರು: ಸಚಿವ ಸ್ಥಾನಕ್ಕೆ ಹೈಕೋರ್ಟ್ ಅನರ್ಹಗೊಳಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಯಡಿಯೂರಪ್ಪ ಯಾರ ಸಹಕಾರದಿಂದ ಕುರ್ಚಿಯಲ್ಲಿ ಕುಳಿತಿದ್ದಾರೆ? ಯಾರ ಮರ್ಜಿಯಲ್ಲಿದ್ದಾರೆ ಎಂಬುದನ್ನು ಮರೆತಿದ್ದಾರೆ. ಸರ್ಕಾರ ರಚನೆಗೆ ಕಾರಣನಾದ ನಮ್ಮನ್ನು ಮರೆತು, ಯೋಗೇಶ್ವರ್ ಗೆ ಮಣೆ ಹಾಕುತ್ತಿರುವುದು ಬೇಸರವಾಗಿದೆ ಎಂದು ಹೇಳಿದ್ದಾರೆ.

ಹುಣಸೂರಿನಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೇಶ್ವರ್ ಅವರೇ ಕಾರಣ. ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೊದಲೇ ತಾವೇ ಅಭ್ಯರ್ಥಿ ಎಂದು ಸೀರೆ, ಬಟ್ಟೆ ಹಂಚಿ ಪ್ರಚಾರ ನಡೆಸಿದರು. ನಾನು ಅಭ್ಯರ್ಥಿ ಎಂದು ಘೋಷಣೆಯಾದ ಮೇಲೂ ಪಕ್ಷದಿಂದ ಚುನಾವಣೆಗಾಗಿ ನನಗೆ ಹಣ ಸಿಕ್ಕಿಲ್ಲ. ನನಗೆ ಬಂದ ಹಣವನ್ನು ಯೋಗೇಶ್ವರ್ ಲಪಟಾಯಿಸಿದ್ದಾರೆ. ಯೋಗೇಶ್ವರ್ ವಿರುದ್ಧ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ಮುಖಂಡರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...