alex Certify BIG NEWS: ʼಕೊರೊನಾʼ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ – ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಕೊರೊನಾʼ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ – ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ಕೊರೊನಾ ಸೋಂಕಿನವರೆಗೆ ಬಂದುನಿಂತಿದೆ. ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ʼಕೊರೊನಾʼ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರವಾಗಿದೆ ಎಂದು ಟೀಕಿಸಿದೆ.

ಕಳ್ಳನೊಬ್ಬ “ನನಗೆ ಕೊರೊನಾ ಬಂದಿದೆ ಮುಟ್ಟಬೇಡಿ” ಎಂದು ಪೊಲೀಸರಿಗೆ ಹೇಳಿದಂತೆ! ”ಕೊರೊನಾ” ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ ಎನ್ನುವುದು ಸ್ಪಷ್ಟವಾಗಿದೆ. ಸಿಡಿ ಹೇಗೆ ಬಂದಿದೆಯೋ, ಹಾಗೆಯೇ ವಾಪಸ್ ಹೋಗುತ್ತದೆ ಎನ್ನುವ ಸಚಿವ ಆರ್.ಶಂಕರ್ ಮಾತು ಸಹ ಪ್ರಕರಣವನ್ನು ಮುಚ್ಚಿ ಹಾಕಲು ನಡೆಯುತ್ತಿರುವ ಷಡ್ಯಂತ್ರಗಳ ಪ್ರತಿಬಿಂಬ ಎಂಬುದು ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಡಿಕೆಶಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಮಾತು: ಸಚಿವ ಶ್ರೀರಾಮುಲು ತರಾಟೆ

ಇದೇ ವೇಳೆ ಸಾರಿಗೆ ನೌಕರರ ಮುಷ್ಕರ ಕುರಿತಾಗಿಯೂ ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳೆದ ಡಿಸೆಂಬರ್‌ನಿಂದಲೇ ಸಾರಿಗೆ ನೌಕರರು ತಮ್ಮ ಬೇಡಿಕೆಗಳಿಗಾಗಿ ಆಗ್ರಹಿಸುತ್ತಾ ಬಂದಿದ್ದರೂ ಬೇಜವಾಬ್ದಾರಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ. ಈ ಸಿಡಿ ಸರ್ಕಾರ ಇಷ್ಟು ದಿನಗಳಲ್ಲಿ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ ಎಂದು ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...