alex Certify BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ; ಮತ್ತೋರ್ವ ಮಾಜಿ ಸಚಿವರ ಹೆಸರು ಬಾಯ್ಬಿಟ್ಟ ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ; ಮತ್ತೋರ್ವ ಮಾಜಿ ಸಚಿವರ ಹೆಸರು ಬಾಯ್ಬಿಟ್ಟ ಆರೋಪಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೈನ್ಸ್ ವಿಶ್ವವಿದ್ಯಾಲಯದ ಉಚ್ಛಾಟಿತ ಚಾನ್ಸಲರ್ ಮಧುಕರ್ ಅಂಗೂರ್ ವಿಚಾರಣೆ ವೇಳೆ ಮಾಜಿ ಸಚಿವರ ಹೆಸರನ್ನು ಬಾಯ್ಬಿಟ್ಟಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೇಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ ಮಧುಕರ್ ವಿರುದ್ಧ ಇಡಿ ತನಿಖೆ ನಡೆಸುತ್ತಿದ್ದು, ಸಮನ್ಸ್ ಜಾರಿ ಮಾಡಿದೆ. ಈ ನಡುವೆ ತನಿಖೆಯ ವೇಳೆ ಮಧುಕರ್ 107 ಕೋಟಿ ಅಕ್ರಮ ಹಣ ವರ್ಗಾಣೆಗೆ ಸಂಬಂಧಿಸಿದಂತೆ ಮಾಜಿ ಸಚಿವರೊಬ್ಬರ ಕೈವಾಡವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವ ಜಮೀರ್ ಅಹ್ಮದ್ ಅವರಿಗೆ 50 ಕೋಟಿ ರೂ. ಸಂದಾಯ ಮಾಡಿರುವುದಾಗಿ ಮಧುಕರ್ ಹೇಳಿದ್ದಾರೆ ಎನ್ನಲಾಗಿದೆ. ಮಧುಕರ್ ಹಾಗೂ ಆತನ ನಾಲ್ಕನೇ ಪತ್ನಿ ಪ್ರಿಯಾಂಕಾ ವಿರುದ್ಧ 107 ಕೋಟಿ ವಂಚನೆ ಆರೋಪ ಕೇಳಿಬಂದಿತ್ತು. ಬೆಂಗಳೂರಿನಲ್ಲಿ ಕಂಪನಿ ತೆರೆದು ಅದರ ಮೂಲಕ ಚಿಕಾಗೋದಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದಾರೆ. ಅಲೈನ್ಸ್ ವಿವಿ ಹೆಸರಲ್ಲಿ, ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಹಣ ಸೇರಿದಂತೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...