alex Certify BIG NEWS: ಆರೋಪಿ ತಲೆ ಮರೆಸಿಕೊಳ್ಳಲು ಸರ್ಕಾರದಿಂದಲೇ ಸಹಕಾರ – ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು…..? ಕಾಂಗ್ರೆಸ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರೋಪಿ ತಲೆ ಮರೆಸಿಕೊಳ್ಳಲು ಸರ್ಕಾರದಿಂದಲೇ ಸಹಕಾರ – ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು…..? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಆರೋಪಿಯೊಬ್ಬನನ್ನು ತಲೆ ಮರೆಸಿಕೊಳ್ಳಲು ಸಹಕರಿಸುವುದೂ ಕೂಡ ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಈ ಸರ್ಕಾರವೇ ಸಹಕರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಆರೋಪಿಯನ್ನು ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

ಬಂಧನ ಭೀತಿ; ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವುದು ಅನುಮಾನ

ನೆರೆ ಬಂದಾಗ – ಸಂಪುಟವಿಲ್ಲದೆ ಪರದಾಟ, ಕೊರೊನಾ ಬಂದಾಗ – ಕೊರೊನಾ ಲೂಟಿಗೆ ಕಿತ್ತಾಟ, ಆರ್ಥಿಕ ಬಿಕ್ಕಟ್ಟಿನಲ್ಲಿ – ಖಾತೆ ಕಿತ್ತಾಟ, ಬೆಲೆ ಏರಿಕೆಯ ಸಂದರ್ಭದಲ್ಲಿ – ಸಿಡಿ ಕಳ್ಳಾಟ, ಕೊರೊನಾ 2ನೇ ಅಲೆ ಹೆಚ್ಚಿದೆ – ದೂರು, ಪ್ರತಿ ದೂರಿನ ರಂಪಾಟ ಇವರಿಗೆ ಜನ ಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆ.

ಸಿಡಿ ಸರ್ಕಾರಕ್ಕೆ ಸಿಡಿ ಚಿಂತೆ, ಜನತೆಗೆ ಬದುಕು ಉಳಿಸಿಕೊಳ್ಳುವ ಚಿಂತೆ. ಬಿಜೆಪಿ vs ಬಿಜೆಪಿ ಕಿತ್ತಾಟದಲ್ಲೇ ಮುಳುಗಿರುವ ಸರ್ಕಾರಕ್ಕೆ ರಾಜ್ಯದಲ್ಲಿನ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲವಾಗಿದೆ. ಹಲವು ದಿನಗಳಿಂದ ಸಾರಿಗೆ ನೌಕರರ ಬಿಕ್ಕಟ್ಟು ದಿನೇ ದಿನೇ ಹೆಚ್ಚುತ್ತಿದ್ದರೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...