alex Certify BIG NEWS: ಇಂದಿನಿಂದ ನ್ಯಾಯಾಲಯದ ಕಲಾಪ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ನ್ಯಾಯಾಲಯದ ಕಲಾಪ ಆರಂಭ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ನ್ಯಾಯಾಲಯದ ಕಲಾಪಗಳು ಸ್ಥಗಿತಗೊಂಡಿದ್ದವು. ಮುಖ್ಯವಾದ ಕಲಾಪಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುತ್ತಿತ್ತು.

ಇದೀಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಆದರೆ ಬಹಳಷ್ಟು ಸಡಿಲಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಹಲವು ಕ್ಷೇತ್ರಗಳ ಕಾರ್ಯ ಚಟುವಟಿಕೆಗಳು ಆರಂಭವಾಗಿವೆ. ಹೀಗಾಗಿ ಸ್ಥಗಿತಗೊಂಡಿದ್ದ ನ್ಯಾಯಾಲಯದ ಕಲಾಪಗಳೂ ಇಂದಿನಿಂದ ಆರಂಭವಾಗಲಿದೆ.

ಹೈಕೋರ್ಟ್ ನ ಮೂರು ಪೀಠಗಳು ಹಾಗೂ ರಾಜ್ಯದ ಎಲ್ಲ ನ್ಯಾಯಾಲಯಗಳು ಇಂದಿನಿಂದ ಎಂದಿನಂತೆ ಕಲಾಪ ಆರಂಭಿಸಲಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಾದ ಮಂಡಿಸುವ ವಕೀಲರಿಗೆ ನೂತನ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...