alex Certify BIG NEWS: ಎಸ್ಮಾ ಎಚ್ಚರಿಕೆಗೆ ಮಣಿಯಲ್ಲ – ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್ಮಾ ಎಚ್ಚರಿಕೆಗೆ ಮಣಿಯಲ್ಲ – ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದ್ದು, ಮುಷ್ಕರ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರು ಘೋಷಿಸಿದ್ದಾರೆ.

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಬೆನ್ನಲ್ಲೇ ಸರ್ಕಾರ ವೇತನ ಹೆಚ್ಚಳಕ್ಕೆ ಸಿದ್ಧ ಆದರೆ 6ನೇ ವೇತನ ಆಯೋಗ ಜಾರಿ ಅಸಾಧ್ಯ. ಮುಷ್ಕರ ನಡೆಸಿದರೆ ಎಸ್ಮಾ ಜಾರಿ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಸರ್ಕಾರದ ನಿರ್ಧಾರಕ್ಕೆ ಸೆಡ್ದು ಹೊಡೆದಿರುವ ಸಾರಿಗೆ ನೌಕರರು ಎಸ್ಮಾ ಜಾರಿಗೂ ಬಗ್ಗಲ್ಲ, ಜೈಲಿಗೆ ಹೋದರೂ ಹೆದರಲ್ಲ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ಇನ್ಮುಂದೆ ವಾಟ್ಸಾಪ್ ನಲ್ಲಿ ಬುಕ್ ಮಾಡಿ LPG ಸಿಲಿಂಡರ್

ಈ ಕುರಿತು ಮಾತನಾಡಿರುವ ಸಾರಿಗೆ ನೌಕರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸರ್ಕಾರದ ಹೆದರಿಕೆ, ಬೆದರಿಕೆಗೆ ಬಗ್ಗಲ್ಲ ಎಸ್ಮಾ ಜಾರಿ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ. 6ನೇ ವೇತನ ಆಯೋಗ ಜಾರಿವರೆಗೆ ಹೋರಾಟ ನಿಲ್ಲಿಸುವ ಪ್ರಶ್ನೆ ಇಲ್ಲ. ನಾಳೆ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಖಾಸಗಿ ಬಸ್ ಗಳನ್ನು ರಸ್ತೆಗೆ ಇಳಿಸಿದರೆ ಅವರ ಸ್ಥಿತಿಯೂ ಹೀಗೆ ಆಗಲಿದೆ. ಇಂದು ನಮ್ಮ ಸ್ಥಿತಿ ಹೀಗಾಗಿದೆ. ನಾಳೆ ಖಾಸಗಿ ಬಸ್ ಚಾಲಕರು, ನಿರ್ವಾಹಕರ ಸ್ಥಿತಿಯೂ ಇದೇ ಆಗಲಿದೆ ಎಂಬುದನ್ನು ಅವರು ಅರಿತುಕೊಳ್ಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...