alex Certify BIG NEWS: ಐಟಿ ದಾಳಿಗೂ ಮುನ್ನ ಮಾಸ್ಟರ್ ಪ್ಲಾನ್ – ಉದ್ಯಮಿಗಳ ಜೊತೆ ಫುಟ್ ಬಾಲ್ ಆಡಿದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಟಿ ದಾಳಿಗೂ ಮುನ್ನ ಮಾಸ್ಟರ್ ಪ್ಲಾನ್ – ಉದ್ಯಮಿಗಳ ಜೊತೆ ಫುಟ್ ಬಾಲ್ ಆಡಿದ ಅಧಿಕಾರಿಗಳು

ಮಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ದಾಳಿ ನಡೆದಿದ್ದು, ದಾಳಿಗೂ ಮುನ್ನ ಅಧಿಕಾರಿಗಳು ಮಾಸ್ಟರ್ ಪ್ಲಾನ್ ಒಂದನ್ನು ಮಾಡಿರುವುದು ಇದೀಗ ಬಹಿರಂಗವಾಗಿದೆ.

ದಾಳಿಯನ್ನು ಗೌಪ್ಯವಾಗಿಡಲೆಂದು ಐಟಿ ಅಧಿಕಾರಿಗಳು ನಿನ್ನೆ ಸಂಜೆಯೇ 60 ಕಾರುಗಳನ್ನು ಬಾಡಿಗೆ ಪಡೆದಿದ್ದರು. ಅನುಮಾನ ಬರಬಾರದೆಂದು ಅಂತರಾಜ್ಯ ಫುಟ್ಬಾಲ್ ಚಾಂಪಿಯನ್ ಶಿಪ್ ಆಡಲು ಕೇರಳಕ್ಕೆ ಹೋಗಬೇಕು ಎಂದು ಹೇಳಿದ್ದರು. ಬಳಿಕ ಎಲ್ಲಾ ವಾಹನಗಳ ಮೇಲೆ ಫುಟ್ಬಾಲ್ ಚಾಂಪಿಯನ್ ಶಿಪ್ ಸ್ಟಿಕರ್ ಅಂಟಿಸಿ ಇಂದು ತೆರಿಗೆ ವಂಚನೆ ಮಾಡುತ್ತಿದ್ದ ಉದ್ಯಮಿಗಳ ಮೇಲೆ ದಾಳಿ ನಡೆಸಿದ್ದಾರೆ.

ಗ್ಯಾಸ್ ಸಿಲಿಂಡರ್ ಗೆ ಸಿಕ್ತಿದೆಯಾ ಸಬ್ಸಿಡಿ…..? ಹೀಗೆ ಚೆಕ್ ಮಾಡಿ

ಕೊರೊನಾ ಸಂದರ್ಭದಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆ, ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜು, ಬಿಜಿಎಸ್, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧೆಡೆ ಆಸ್ಪತ್ರೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...