alex Certify BIG NEWS: ಕೇಂದ್ರ ಸಚಿವ ಸದಾನಂದಗೌಡಗೆ ಯತ್ನಾಳ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಚಿವ ಸದಾನಂದಗೌಡಗೆ ಯತ್ನಾಳ್ ತಿರುಗೇಟು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಓರ್ವ ಆರ್ಡಿನರಿ ಶಾಸಕ, ಪಕ್ಷದ ಅಧ್ಯಕ್ಷರಲ್ಲ ಎಂಬ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಯತ್ನಾಳ್, ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಸದಾನಂದಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಡಿ.ವಿ.ಎಸ್ ಹೇಳಿದಂತೆ ನಾನೊಬ್ಬ ಸಾಮಾನ್ಯ ಶಾಸಕ. ಇದು ನೂರಕ್ಕೆ ನೂರರಷ್ಟು ನಿಜ. ನಾನು ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲೇ ಕೇಂದ್ರ ಸಚಿವನಾಗಿದ್ದೆ. ಸದಾನಂದಗೌಡರು ಈಗ ಕೇಂದ್ರ ಸಚಿವರಾಗಿದ್ದಾರೆ. ಹೀಗಿರುವಾಗ ಯಾರು ಸೀನಿಯರ್ ಎಂಬುದನ್ನು ನೀವೇ ತಿಳಿದುಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.

ಸಂಕ್ರಮಣದ ವೇಳೆಗೆ ಸಂಪುಟ ವಿಸ್ತರಣೆ ಆಗುತ್ತೋ, ಬದಲಾವಣೆ ಆಗುತ್ತೋ ಗೊತ್ತಿಲ್ಲ ಎಂಬ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ್ದ ಸಚಿವ ಡಿ.ವಿ.ಎಸ್ ಬೀದಿಯಲ್ಲಿ ನಿಂತು ಮಾತನಾಡುವುದು ಯತ್ನಾಳ್ ಗೆ ಶೋಭೆಯಲ್ಲ. ಅವರೊಬ್ಬ ಆರ್ಡಿನರಿ ಶಾಸಕ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಯತ್ನಾಳ್ ಇದೀಗ ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...