alex Certify BIG NEWS: ಕೋವಿಡ್ ಸಂದರ್ಭದಲ್ಲಿ ಇದಕ್ಕಿಂತ ಉತ್ತಮ ಬಜೆಟ್ ನಿರೀಕ್ಷೆ ಅಸಾಧ್ಯ – ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸಂದರ್ಭದಲ್ಲಿ ಇದಕ್ಕಿಂತ ಉತ್ತಮ ಬಜೆಟ್ ನಿರೀಕ್ಷೆ ಅಸಾಧ್ಯ – ಸಿಎಂ ಯಡಿಯೂರಪ್ಪ

ಬೆಂಗಳೂರು: 2021-22ನೇ ಸಾಲಿನ ಕೇಂದ್ರ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದು ಭಾರತದ ಅರ್ಥವ್ಯವಸ್ಥೆಗೆ ಸಂಜೀವಿನಿಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಕೊರೊನಾದಿಂದಾಗಿ ಆರ್ಥಿಕತೆಗೆ ಹೊಡೆತ ಬಿದ್ದಿತ್ತು, ಇಂಥಹ ಸಂದರ್ಭದಲ್ಲಿ ಇದಕ್ಕಿಂತ ಉತ್ತಮ ಬಜೆಟ್ ಮಂಡನೆ ಅಸಾಧ್ಯ. ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದರು.

ಆರ್ಥಿಕ ಸಂಕಷ್ಟದಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್:‌ ಮತ್ತೆ ಏರಿಕೆಯಾಗಲಿದೆ ಪೆಟ್ರೋಲ್‌ – ಡಿಸೇಲ್‌ ಬೆಲೆ

ಇದು ಕೃಷಿ, ಕೈಗಾರಿಕೆ, ಮೂಲಸೌಕರ್ಯ ಬಲಗೊಳಿಸುವ ಬಜೆಟ್ ಆಗಿದ್ದು, ಕೋವಿಡ್ ವ್ಯಾಕ್ಸಿನ್ ಗೂ ಅನುದಾನ ಬಿಡುಗಡೆ ಮಾಡಿರುವುದು ಅನುಕೂಲಕರವಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...