alex Certify BIG NEWS: ಡಿಕೆಶಿಗೆ ಟಾಂಗ್ ನೀಡಿದ ಬಿ.ವೈ. ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿಗೆ ಟಾಂಗ್ ನೀಡಿದ ಬಿ.ವೈ. ವಿಜಯೇಂದ್ರ

ಬೆಂಗಳೂರು; ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಉಪಚುನಾವಣೆ ಸೋಲಿನಿಂದ ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಶಿರಾ, ಆರ್.ಆರ್.ನಗರ ಚುನಾವಣೆ ಸೋಲು ಕಾಂಗ್ರೆಸ್ ಹಾಗೂ ಡಿಕೆಶಿಗೆ ಆಘಾತ ತಂದಿದೆ. ಹೀಗಾಗಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ಇಂತಹ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸಂತೋಷ್ ಚೇತರಿಸಿಕೊಳ್ಳುತ್ತಿದ್ದಂತೆಯೇ ಸಿಎಂ ಯಡಿಯೂರಪ್ಪ ಭೇಟಿಯಾಗಿ, ಏನೆಂಬುದನ್ನು ಚರ್ಚಿಸುತ್ತಾರೆ. ಊಹಾಪೋಹಗಳನ್ನು ಹರಡುವುದು ಬೇಡ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...