alex Certify BIG NEWS: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ – ನೇರವಾಗಿಯೇ ಆಶಯ ವ್ಯಕ್ತಪಡಿಸಿದ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ – ನೇರವಾಗಿಯೇ ಆಶಯ ವ್ಯಕ್ತಪಡಿಸಿದ ರೇಣುಕಾಚಾರ್ಯ

ದಾವಣಗೆರೆ: ಸಿಎಂ ದೆಹಲಿ ಭೇಟಿ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪೈಪೋಟಿ ಕೂಡ ಜೋರಾಗಿದೆ. ಈ ನಡುವೆ ಶಾಸಕ ಎಂ.ಪಿ.ರೇಣುಕಾಚಾರ್ಯ, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದಿದ್ದಾರೆ.

ಇಷ್ಟು ದಿನ ಪರೋಕ್ಷವಾಗಿ ಸಚಿವ ಸ್ಥಾನದ ಆಶಯ ವ್ಯಕ್ತಪಡಿಸುತ್ತಿದ್ದ ರೇಣುಕಾಚಾರ್ಯ ಇದೀಗ ನೇರವಾಗಿಯೇ ಬೇಡಿಕೆ ಇಟ್ಟಿದ್ದು, ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಆದರೆ ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಪರಮಾಧಿಕಾರ. ಸಚಿವ ಸ್ಥಾನ ನೀಡಿದರೆ ಯಶಸ್ವಿಯಾಗಿ ನಿಭಾಯಿಸುವ ಶಕ್ತಿಯಿದೆ ಎಂದು ಹೇಳಿದರು.

ಇನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಸೂರ್ಯ-ಚಂದ್ರ ಎಷ್ಟು ಸತ್ಯವೋ ನಾಯಕತ್ವ ಬದಲಾವಣೆ ಇಲ್ಲ ಎಂಬುದೂ ಅಷ್ಟೇ ಸತ್ಯ. ಯಡಿಯೂರಪ್ಪ ನಾಯಕತ್ವದಲ್ಲಿಯೇ ಬಿಜೆಪಿ ಸರ್ಕಾರ ಮುಂದುವರಿಯಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...