ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯಿಂದ ಯಾವುದೇ ವಿನಾಯಿತಿ ಇಲ್ಲವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊನ್ನೆ ಘೋಷಣೆ ಮಾಡಿದ್ದ ಎಲ್ಲ ವಿನಾಯಿತಿ ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಹೇಳಿದೆ.
ಉತ್ತರ ಪ್ರದೇಶ, ಕೇರಳದಲ್ಲಿ ಜಾರಿಗೆ ಬಂದಿರುವ ರೀತಿಯಲ್ಲಿಯೇ ಲಾಕ್ ಡೌನ್ ಜಾರಿಗೆ ಬರಲಿದೆ. ಲಾಕ್ ಡೌನ್ ಸಡಿಲಿಕೆ ಕೈಬಿಟ್ಟ ಸರ್ಕಾರ, ರೆಡ್ ಜೋನ್ ವಲಯದಲ್ಲಿ ಮತ್ತಷ್ಟು ಬಿಗಿ ಭದ್ರತೆ ಕೈಗೊಂಡಿರುವುದಾಗಿ ಹೇಳಿದೆ. ಕೇಂದ್ರದ ಮಾರ್ಗಸೂಚಿಯಂತೆ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ.
ರೈತರು ಸೇರಿದಂತೆ ಹಲವರ ವಿರುದ್ಧ ಟಿಪ್ಪು ಜಯಂತಿ ವೇಳೆ ದಾಖಲಾಗಿದ್ದ ಕೇಸ್ ವಾಪಸ್ ಪಡೆದಿರುವುದಾಗಿ ಸಿಎಂ ಹೇಳಿದ್ದಾರೆ. ಹಾಗೆ 3 ತಿಂಗಳು ಉಚಿತ ಸಿಲಿಂಡರ್ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಕೃಷಿ, ತೋಟಗಾರಿಕೆ ಕೆಲಸ ಎಂದಿನಂತೆ ನಡೆಯಲಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮಕೈಗೊಳ್ಳುತ್ತೇವೆ. ಕ್ವಾರಂಟೈನ್ ಮುರಿದು ಹಲ್ಲೆ ನಡೆಸಿದ್ರೆ ಕಠಿಣ ಕ್ರಮಕೈಗೊಳ್ಳುತ್ತೇವೆಂದು ಯಡಿಯೂರಪ್ಪ ಹೇಳಿದ್ದಾರೆ.